ಬಾಲು ಈ ಬಾರಿ ನಿಮಗೆ ಒಂದು ಅಪರೂಪದ ಕಲ್ಲು ತೋರಿಸ್ತೀನಿ ಅಂತ ಅಂದ್ರು ,
ನಂಗೆ ತುಂಬಾ ಕುತೂಹಲ !!
ಹೋಗ್ತೀರೋದು ಕಗ್ಗಾಡಿಗೆ.. ಅಲ್ಲಿ ಈ ಅಸಾಮಿ ಏನು ತೋರಿಸ್ತಾರೋ ಏನೋ ಅಂತ !
ಬುರುಡೆ ಅರಣ್ಯದಿಂದ ಬೆಳಗ್ಗೆನೆ ಹೊರಟೆವು, ದಟ್ಟಾರಣ್ಯದ ದಾರಿ ಸವೆದು ಮೇಲೆಬಂದರೆ
ಅಲ್ಲೇ ಒಂದು ಬಿರ್ಲಾ ರವರ ಕಾಫಿ ಎಸ್ಟೇಟ್ ,
ಈ ಟಾಟಾ, ಬಿರ್ಲಾ ರವರು ಎಲ್ಲೆಲ್ಲೋ ಅಸ್ತಿ ಮಾಡಿ ಇಟ್ಟಿದ್ದಾರೆ ಮಾರಾಯ್ರೆ ,
ಎಸ್ಟೇಟ್ ದಾಟಿ ಹಾಗೆ ಮೇಲೆ ಬಂದರೆ ಸಿಗುವುದೇ ಹೊನ್ನಮೇಟಿ ಬೆಟ್ಟ.
ಕಲ್ಲನ್ನು ಜೋರಾಗಿ ಕುಟ್ಟಿದಾಗ ಹೊರ ಹೊಮ್ಮುತ್ತದೆ ಥರಾವರಿ ನಾದ ,
ನಿಸರ್ಗವೇ ಹಾಗೆ, ತನ್ನ ಗರ್ಭದಲ್ಲಿ ಎಷ್ಟೋ ಅಚ್ಚರಿಗಳನ್ನು ತುಂಬಿ ಕೊಂಡಿರುತ್ತದೆ ಅಲ್ವಾ?
ಇಲ್ಲಿ ನೋಡಿ , ದಟ್ಟಾರಣ್ಯ ಮಧ್ಯದಲ್ಲಿ ಒಂದು ನಿಸರ್ಗದ ವಿಸ್ಮಯ ,
ಹಾಗೆ ನೋಡಿದರೆ ಸುತ್ತ ಮುತ್ತಲೂ ಹಲವಾರು ಕಲ್ಲುಗಳಿವೆ , ಅವುಗಳಿಗೆ ಇಲ್ಲ ಈ ಭಾಗ್ಯ .
ಹಂಪಿಯ ವಿಜಯ ವಿಠಲ ದೇವಸ್ಥಾನದ "ಸರಿಗಮಪ" ಕಂಬಗಳು ನೆನಪಿಗೆ ಬರುತ್ತವೆ
ಕಲ್ಲಿಗೆ ಹೇಗೆ ಬಂತು ಈ ಗುಣ ಎಂದು ಅಂತರ್ಜಾಲ ತಾಕಿಸಿದಾಗ ಸಿಕ್ಕಿದ್ದು ಇಷ್ಟು.
ಕೆಲವು ಬಗೆಯ "granite" ಗಳಿಗೆ ಈ ಗುಣ ಇರುತ್ತದೆಂದು ,
ಈ ಕಲ್ಲನ್ನು ಒಂದು ನಿರ್ದಿಷ್ಟ ಬಗೆಯಲ್ಲಿ ತಾಕಿಸಿದಾಗ , ತರಂಗಗಳು ಹೊರಹೊಮ್ಮುತ್ತದೆಂದು ತಿಳಿಯಿತು.
ಬಾಕಿ ಕಲ್ಲಿನ ತನಕ ಚಾರಣ ಮಾಡಬೇಕು,
ಸ್ವಂತ ಗಾಡಿ ಇದ್ರೆ ಒಳ್ಳೇದು ,
ಸಾಧ್ಯವಾದರೆ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೋದಾಗ ಇಲ್ಲಿಯೂ ಒಮ್ಮೆ ಭೇಟಿ ಕೊಡಿ.